masthmagaa.com:
ಕಿರುತರೆಯ ಪ್ರಸಿದ್ದ ಸಿಂಗಿಂಗ್ ರಿಯಾಲಿಟಿ ಶೋ ʻಸರಿಗಮಪ 19ʼ ಕೊನೆ ಹಂತ ತಲುಪಿದೆ. ಯಶಸ್ವಿ 47 ಸಂಚಿಕೆಗಳನ್ನ ಪೂರೈಸಿರುವ ʻಸರಿಗಮಪʼ ಸೀಸನ್ 19ರ ಗ್ರಾಂಡ್ ಫಿನಾಲೆ ಎಪಿಸೋಡ್ಸ್ ಇದೇ ಶನಿವಾರ ಹಾಗೂ ಭಾನುವಾರ ಸಂಜೆ 6.30 ಕ್ಕೆ ಪ್ರಸಾರವಾಗಲಿದೆ. ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಫಿನಾಲೆ ಚಿತ್ರೀಕರಣ ಜರುಗಿದೆ. ಅರ್ಜುನ್ ಜನ್ಯ, ವಿಜಯ್ ಪ್ರಕಾಶ್ ಮತ್ತು ಮಹಾಗುರುಗಳಾದ ಹಂಸಲೇಖ ಈ ಕಾರ್ಯಕ್ರಮದ ತೀರ್ಪುಗಾರರು. ನಾಡಿನ ಹೆಸರಾಂತ ಗಾಯಕ, ಗಾಯಕಿಯರು, ತೀರ್ಪುಗಾರರ ಜೊತೆ ಮೆಂಟರ್ಗಳಾಗಿ ತಮ್ಮ ತಂಡದ ಪ್ರತಿಯೊಬ್ಬ ಸ್ಪರ್ದಿಯನ್ನೂ ತಿದ್ದಿ ತೀಡಿ, ಅವರಲ್ಲಿರುವ ವಿಶೇಷ ಪ್ರತಿಭೆಯನ್ನು ವೇದಿಕೆಯ ಮೇಲೆ ಪ್ರಸ್ತುತಪಡಿಸುವಲ್ಲಿ ಶ್ರಮವಹಿಸಿದ್ದಾರೆ. ನಿರೂಪಕಿ ಅನುಶ್ರೀ ಸರಿಗಮಪ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದಾರೆ. ಸರಿಗಮಪ’ ಕಾರ್ಯಕ್ರಮದ ಫಿನಾಲೆಯಲ್ಲಿ ರಮೇಶ್ ಅರವಿಂದ್ ಅವರು ‘ಶಿವಾಜಿ ಸುರತ್ಕಲ್’ ಸಿನಿಮಾ ತಂಡದ ಜೊತೆ ಈ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಆಗಮಿಸಿ ವೇದಿಕೆಯ ಮೆರಗುನ್ನು ಹೆಚ್ಚಿಸಿದ್ದಾರೆ. ಅಂತಿಮ ಟಾಪ್ 6 ಸ್ಪರ್ಧಿಗಳಾಗಿ ಮಂಗಳೂರಿನ ತನುಶ್ರೀ, ಬೆಂಗಳೂರಿನ ಕುಷಿಕ್, ಮೈಸೂರಿನ ಗುರುಪ್ರಸಾದ್, ಉಡುಪಿಯ ಶಿವಾನಿ, ನವೀನ್ ಕೊಪ್ಪ, ಸೊಲ್ಲಾಪುರದ ರೇವಣಸಿದ್ಧ ಮತ್ತು ಕುಶಾಲನಗರದ ಪ್ರಗತಿ ಬಡಿಗೇರ್ ಫಿನಾಲೆಯಲ್ಲಿ ಸೆಣೆಸಲಿದ್ದಾರೆ. ಗೆಲುವಿನ ಪಟ್ಟ ಯಾರಿಗೆ ಸಿಗಲಿದೆ ಎಂದು ಇದೇ ಭಾನುವಾರ ತಿಳಿಯಲಿದೆ.
-masthmagaa.com
Contact Us for Advertisement