masthmagaa.com:
ವೀರ ಸಾವರ್ಕರ್ ವಿಚಾರದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಿನ ಕಲಹಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧ ಸಾಕ್ಷಿಯಾಗಿದೆ. ಬೆಳಗಾವಿಯ ಸುವರ್ಣ ಸೌಧದ ಅಸೆಂಬ್ಲಿ ಹಾಲ್ನಲ್ಲಿ ಸಾವರ್ಕರ್ ಪೋಟೋ ಹಾಕಿದ್ದನ್ನ ಖಂಡಿಸಿ ವಿರೋಧ ಪಕ್ಷ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣೌ ವಿಧಾನಸೌಧದ ವಿಐಪಿ ಗೇಟ್ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತಿತರ ಮುಖಂಡರು ಭಾಗಿಯಾಗಿದ್ರು. ಮಾಜಿ ಸಿಎಂ ಸಿದ್ದರಾಮಯ್ಯ ಕುವೆಂಪು, ಶಿಶುನಾಳ ಷರೀಫ, ಬಾಬು ಜಗಜೀವನ್ ರಾವ್, ಮಹರ್ಷಿ ವಾಲ್ಮೀಕಿ ಫೋಟೋಗಳನ್ನ ಹಿಡಿದು ಪ್ರತಿಭಟನೆ ಮಾಡಿದ್ದಾರೆ. ಡಿಕೆಶಿ ಸ್ವಾತಂತ್ರ್ಯ ಹೋರಾಟಕ್ಕೆ ಸಾವರ್ಕರ್ ಕೊಡುಗೆ ಏನು ಇಲ್ಲ ಅಂತ ಹೇಳಿದ್ದಾರೆ. ಇನ್ನು ಭಾವಚಿತ್ರ ಹಾಕೊ ವಿಚಾರ ಸ್ಪೀಕರ್ಗೆ ಬಿಟ್ಟಿದ್ದು, ಅದು ಅವರ ನಿರ್ಧಾರ. ನನಗೆ ಗೊತ್ತಿಲ್ಲ ಅಂತ ಬೊಮ್ಮಾಯಿ ಹೇಳಿದ್ದಾರೆ.
-masthmagaa.com
Contact Us for Advertisement