masthmagaa.com:
ಮಹಾರಾಷ್ಟ್ರದಲ್ಲಿ ಉದ್ದವ್ ಠಾಕ್ರೆ ಮತ್ತು ಸಿಎಂ ಏಕನಾಥ್ ಶಿಂಧೆ ನಡುವೆ ಹಗ್ಗಾಜಗ್ಗಾಟ ಇನ್ನೂ ಮುಗಿದಿಲ್ಲ. ಬಂಡಾಯ ಶಾಸಕರನ್ನ ಅನರ್ಹಗೊಳಿಸಬೇಕು ಅಂತ ಉದ್ದವ್ ಠಾಕ್ರೆ ಬಣ ಸಲ್ಲಿಸಿರೊ ಅರ್ಜಿಯ ತುರ್ತು ವಿಚಾರಣೆಯನ್ನ ಸುಪ್ರೀಂಕೋರ್ಟ್ ನಿರಾಕರಿಸಿದೆ. ಜೊತೆಗೆ ನಾಳೆಯೂ ವಿಚಾರಣೆಯನ್ನ ನಡೆಸೋಕೆ ಸಾಧ್ಯವಿಲ್ಲ, ಅದಕ್ಕೆ ಸ್ವಲ್ಪ ಸಮಯ ಬೇಕಾಗುತ್ತೆ ಅಂತ ಹೇಳಿದೆ. ಸುಪ್ರೀಂಕೋರ್ಟ್ನಲ್ಲಿ ಅರ್ಜಿಗಳು ಇತ್ಯರ್ಥವಾಗೋವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರ್ದು ಅಂತ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ಗೆ ಸುಪ್ರೀಂಕೋರ್ಟ್ ಆದೇಶಿಸಿದೆ.
-masthmagaa.com
Contact Us for Advertisement