masthmagaa.com:
ನಾಡಿದ್ದು ಆಗಸ್ಟ್ 15ಕ್ಕೆ ಭಾರತಕ್ಕೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ಆದ್ರೆ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದ್ದಂತೇ ಅದರ ಮೇಲೆ ಉಗ್ರರ ಕರಿನೆರಳು ಬಿದ್ದಿದೆ. ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ಇವತ್ತು ಬಿಎಸ್ಎಫ್ ಯೋಧರು ಕಾರ್ಯಾಚರಣೆ ನಡೆಸಿ ಉಗ್ರರ ಅಡುಗುದಾಣವನ್ನ ಪತ್ತೆಹಚ್ಚಿದ್ದಾರೆ. ಜೊತೆಗೆ ಅದರಲ್ಲಿದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ಸೀಜ್ ಮಾಡಿದ್ದಾರೆ. ಅತ್ತ ಪಂಜಾಬ್ನ ಅಮೃತ್ಸರದ ಗ್ರಾಮವೊಂದರಲ್ಲಿ ಪೊಲೀಸರು ಟಿಫಿನ್ ಬಾಕ್ಸ್ ಸ್ಫೋಟಕವನ್ನ ಸೀಜ್ ಮಾಡಿದ್ದಾರೆ. ಟಿಫಿನ್ ಬಾಕ್ಸ್ ಒಳಗೆ ಸುಮಾರು ಮೂರು ಕೆಜಿಯಷ್ಟು ಸುಧಾರಿತ ಸ್ಫೋಟಕ ಸಾಧನವನ್ನ ಫಿಕ್ಸ್ ಮಾಡಲಾಗಿತ್ತು. ಇದಲ್ಲದೆ ಐದು ಗ್ರನೇಡ್, ಮದ್ದುಗುಂಡುಗಳು ಸಿಕ್ಕಿವೆ. ಇವೆಲ್ಲವನ್ನ ಗಡಿಯಾಚೆಗಿನಿಂದ ಭಾರತಕ್ಕೆ ಡ್ರೋನ್ ಮೂಲಕ ಸಾಗಿಸಲಾಗಿದೆ ಅಂತ ಪಂಜಾಬ್ ಪೊಲೀಸರು ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಉಗ್ರ ಕೃತ್ಯ ನಡೆಸಲು ಉಗ್ರರು ಸಿದ್ಧತೆ ನಡೆಸುತ್ತಿದ್ದಾರೆ ಅಂತಾನೂ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಚೆಕಿಂಗ್ ಹೆಚ್ಚಿಸಲಾಗಿದೆ. ಇನ್ನು ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಲಾಲ್ ಚೌಕ್ನಲ್ಲಿ ಬಿಜೆಪಿ ಕಿಸಾನ್ ಮೋರ್ಚಾ ಅಧ್ಯಕ್ಷ ಗುಲಾಮ್ ರಸೂಲ್ ದರ್ ಮತ್ತು ಆತನ ಪತ್ನಿಯನ್ನ ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ಮತ್ತೊಂದುಕಡೆ ಜಮ್ಮು ಕಾಶ್ಮೀರದ ಕಿಶ್ತ್ವಾರ್ಲ್ಲಿ ಹಿಜ್ಬುಲ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಳ್ಳಲಾಗಿದೆ.
-masthmagaa.com
Contact Us for Advertisement