masthmagaa.com:
AICC ನಿನ್ನೆ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಪ್ರಕಟಿಸಿದೆ. ಮುಂದಿನ 3-4 ದಿನಗಳಲ್ಲಿ 2ನೇ ಪಟ್ಟಿಯನ್ನ ಪ್ರಕಟಿಸಲಾಗುತ್ತೆ ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಇನ್ನು ಮೊದಲ ಪಟ್ಟಿಯಲ್ಲಿ ಕೋಲಾರ ಹಾಗೂ ಬಾದಾಮಿ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗದ ಕಾರಣ, ಸಿದ್ದರಾಮಯ್ಯ ಅವರು ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಅಂತ ಕೇಳಿದ ಪ್ರಶ್ನೆಗೆ, ಇದು ಪಕ್ಷದ ಹೈಕಮಾಂಡ್ಗೆ ಬಿಟ್ಟದ್ದು. ಅವ್ರನ್ನೇ ಕೇಳಬೇಕು ಎಂದಿದ್ದಾರೆ. ಅಂದ್ಹಾಗೆ ಕಾಂಗ್ರೆಸ್ನ ಮೊದಲ ಅಭ್ಯರ್ಥಿ ಪಟ್ಟಿ ಬಗ್ಗೆ ಪ್ರತ್ಯೇಕವಾಗಿ ವರದಿಯೊಂದನ್ನ ಈಗಾಗಲೇ ಮಾಡಲಾಗಿದೆ. ಅದನ್ನ ನೀವು ನೋಡಬಹುದು.
-masthmagaa.com
Contact Us for Advertisement