masthmagaa.com:
ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ, ಸದ್ಯ ವಿಧಾನ ಪರಿಷತ್ ಸದಸ್ಯರಾಗಿರೋ ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷವನ್ನ ತೊರೆಯೋ ಸುಳಿವು ಕೊಟ್ಟಿದ್ದಾರೆ. ಕಾಂಗ್ರೆಸ್ಗೂ ನಮಗೂ ಇನ್ನು ಮುಗಿದ ಅಧ್ಯಾಯ ಅಂತ ಅವರು ಹೇಳಿದ್ದಾರೆ. ಇತ್ತೀಚೆಗಷ್ಟೇ ವಿಧಾನಪರಿಷತ್ ವಿಪಕ್ಷ ಸ್ಥಾನ ಬಿ.ಕೆ. ಹರಿಪ್ರಸಾದ್ ಪಾಲಾಗಿತ್ತು. ಇದರಿಂದ ವಿಪಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಇಬ್ರಾಹಿಂಗೆ ನಿರಾಸೆಯಾಗಿತ್ತು.
ಸಿಎಂ ಇಬ್ರಾಹಿಂ ನಡೆ ಬಗ್ಗೆ ಸಿದ್ದರಾಮಯ್ಯ ಅವರನ್ನ ಕೇಳ್ದಾಗ, ನಾನು ಮಾಧ್ಯಮದವರಿಗೆ ಏನೂ ಹೇಳಲ್ಲ, ಇಬ್ರಾಹಿಂ ಜೊತೆ ಮಾತಾಡ್ತೀನಿ ಅಂದ್ರು. ಇನ್ನು ಜೆಡಿಎಸ್ನ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ದೇವೇಗೌಡ್ರು ಮತ್ತು ಜೆಡಿಎಸ್ ಉಳಿಬೇಕು ಅನ್ನೋ ಆಸೆ ಅವರಿಗಿದೆ. ಅವರು ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದಿದ್ದಾರೆ.
-masthmagaa.com
Contact Us for Advertisement