ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ʻಶಕ್ತಿʼ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ!

masthmagaa.com:

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ʻಶಕ್ತಿʼ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್​​​​ ಕಾರ್ಡ್​​ ಮಾದರಿಯನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಸಾಂಕೇತಿಕವಾಗಿ 5 ಜನ ಮಹಿಳೆಯರಿಗೆ ಸಿಎಂ ಹಾಗೂ ಡಿಸಿಎಂ ಸ್ಮಾರ್ಟ್ ಕಾರ್ಡ್​ ವಿತರಣೆ ಮಾಡಿದ್ದಾರೆ. ​​ಜೊತೆಗೆ ವಿಧಾನಸೌಧದಿಂದ ಮೆಜೆಸ್ಟಿಕ್‌ವರೆಗೆ​​ BMTC ಬಸ್‌ನಲ್ಲಿ ತೆರಳಿ ಅಲ್ಲಿ ಧರ್ಮಸ್ಥಳಕ್ಕೆ ಹೋಗ್ತಿದ್ದ ಮಹಿಳೆಯರಿಗೆ ಟಿಕೆಟ್‌ ನೀಡಿ ಯೋಜನೆಗೆ ಚಾಲನೆ ನೀಡಿದ್ದಾರೆ. ಬಳಿಕ ಮಾತಾಡಿದ ಸಿದ್ದರಾಮಯ್ಯ, ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಹೆಚ್ಚು ಭಾಗಿಯಾಗಬೇಕು. 5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳಿಂದ ಮಹಿಳೆಯರಿಗೆ ಅನುಕೂಲವಾಗಲಿದ್ದು, ಮಂಗಳಮುಖಿಯರು ಕೂಡ ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡಬಹುದು. ಜೊತೆಗೆ ಗ್ಯಾರಂಟಿಗಳ ಮೇಲೆ ವಿರೋಧ ಪಕ್ಷಗಳು ಮಾಡೋ ಟೀಕೆಗೆ ನಾವು ತಲೆ ಕೆಡಿಸಿಕೊಳ್ಳೋದಿಲ್ಲ. ಇನ್ನು ಜುಲೈ 1ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ ಅಂತ ಹೇಳಿದ್ದಾರೆ. ಇನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆತಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಇಂದಿನಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣವಿರುತ್ತದೆ. ಉಚಿತ ಪ್ರಯಾಣಕ್ಕೆ APL​​, BPL​ ಕಾರ್ಡ್‌ ಅನ್ನೊ ನಿಯಮ ಇಲ್ಲ. ಯಾವುದಾದರೂ ಆಧಾರ್‌ ಅಥ್ವಾ ವೋಟರ್‌ ಐಡಿ ತೋರಿಸಿ ಪ್ರಯಾಣ ಮಾಡಬಹುದು. ಸ್ಮಾರ್ಟ್​ ಕಾರ್ಡ್​ ಮಾಡಿಸೋಕೆ ಯಾರೂ ದುಡ್ಡು ಕೊಡಬೇಕಿಲ್ಲ. ಸ್ಮಾರ್ಟ್ ಕಾರ್ಡ್​​ ಮಾಡಿಸಿಕೊಳ್ಳೋಕೆ 3 ತಿಂಗಳ ಕಾಲಾವಕಾಶವಿದೆ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply