masthmagaa.com:
ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗ್ತಿದೆ ಅಂತ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಅರೋಪಿಸಿದ್ದಾರೆ. ಜೊತೆಗೆ ಮುಖ್ಯವಾದ ಹುದ್ದೆಗಳನ್ನು ಬಹಳಷ್ಟು ಜನರಿಗೆ ಕೊಟ್ಟಿಲ್ಲ. ನಮ್ಮ ಸಮಾಜದ ಅಧಿಕಾರಿಗಳಿಗೆ ತೊಂದರೆಯಾಗಿದೆ ಅಂತ ಆರೋಪಿಸಿದ್ದಾರೆ. ಇದೇ ವೇಳೆ ಸ್ವಪಕ್ಷದ ವಿರುದ್ದ ಶಿವಶಂಕರಪ್ಪ ಕಿಡಿಕಾರಿದ್ದಾರೆ. ಲಿಂಗಾಯತ ಸಿಎಂ ಹಿಂದೆ ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಇದ್ರು. ಆಗ ಎಲ್ರು ಚನ್ನಾಗಿ ಇದ್ರು, ಈಗ ನಮ್ಮವರೆಲ್ಲ ಕಂಗಾಲಾಗಿದ್ದಾರೆ. ಲಿಂಗಾಯತರಿಗೆ ಡಿಸಿಎಂ ನೀಡುವ ವಿಚಾರವಾಗಿ ಮಾತಾಡಿರುವ ಶಿವಶಂಕರಪ್ಪ, ಡಿಸಿಎಂ ತಗೊಂಡು ಏನ್ ಮಾಡಬೇಕು ಆದ್ರೆ ಸಿಎಂ ಆಗಬೇಕು ಯಾವಾಗಲೂ ಸಿಎಂ ಹುದ್ದೆಗೆ ಪ್ರಪೋಜಲ್ ಇದ್ದೇ ಇರುತ್ತೆ ಅಂತ ಹೇಳಿದ್ದಾರೆ. ಇತ್ತ ಶಿವಶಂಕರಪ್ಪ ಆರೋಪವನ್ನು ಸಿಎಂ ಸಿದ್ದರಾಮಯ್ಯನವರು ತಳ್ಳಿಹಾಕಿದ್ದಾರೆ. ಜೊತೆಗೆ ನಮ್ಮ ಸರ್ಕಾರದಲ್ಲಿ ಲಿಂಗಾಯತರೇ 7 ಮಂದಿ ಸಚಿವರಿಲ್ವಾ ಅಂತ ಪ್ರಶ್ನಿಸಿದ್ದಾರೆ. ನಮ್ಮ ಸರ್ಕಾರ ಯಾವ ಸಮುದಾಯಕ್ಕೂ ಅನ್ಯಾಯ ಮಾಡಿಲ್ಲ. ನನ್ನ ಬಳಿ ಅಂಕಿ ಅಂಶಗಳಿವೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹ ಪ್ರತಿಕ್ರಿಯೆ ನೀಡಿದ್ದು, ಶಾಮನೂರು ಶಿವಶಂಕರಪ್ಪ ಅವರು ಯಾಕೆ ಹೀಗೆ ಹೇಳಿದ್ದಾರೆ ಎನ್ನುವ ಕುರಿತು ಅವರ ಬಳಿ ಚರ್ಚೆ ಮಾಡುತ್ತೇನೆ ಅಂತ ಹೇಳಿದ್ದಾರೆ. ಇನ್ನೊಂದ್ ಕಡೆ ಶಿವಶಂಕರಪ್ಪ ಅವರು ವ್ಯಕ್ತಪಡಿಸಿರೋ ಭಾವನೆಗಳಿಗೆ ನನ್ನ ಸಂಪೂರ್ಣ ಬೆಂಬಲ ಇದೆ ಅಂತ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
-masthmagaa.com
Contact Us for Advertisement