ನಾವೇ ಮುಂದೆ ನಿಂತು ಟಿಪ್ಪು ಜಯಂತಿ ಆಚರಿಸ್ತೇವೆ ಎಂದ ಬಿಜೆಪಿ ನಾಯಕ..!

 ಹೊಸಕೋಟೆ:ಟಿಪ್ಪು ಜಯಂತಿಯನ್ನು ಬಿಜೆಪಿ ಮೊದಲಿನಿಂದಲೂ ವಿರೋಧಿಸಿಕೊಂಡೇ ಬಂದಿದೆ. ಆದ್ರೆ ಈ ಬಾರಿ ಟಿಪ್ಪು ಜಯಂತಿಯನ್ನು ನಾವೇ ಆಚರಿಸ್ತೇವೆ ಅಂತ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದ ಉರುಸ್ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿಯಾದ್ರು. ಈ ವೇಳೆ ಮಾತನಾಡಿದ ಅವರು, ಈವರೆಗೂ ಬಿಜೆಪಿಯವರು ಟಿಪ್ಪು ಜಯಂತಿ ವಿರೋಧಿಸುತ್ತಾ ಬಂದಿದ್ದಾರೆ. ಆದ್ರೆ ಈ ಬಾರಿ ನಾವೇ ಮುಂದೆ ನಿಂತು ಟಿಪ್ಪು ಜಯಂತಿ ಆಚರಿಸ್ತೇವೆ. ಈ ಹಿಂದೆಯೂ ಬಚ್ಚೇಗೌಡ ಟಿಪ್ಪು ಜಯಂತಿ ಆಚರಿಸಿದ್ದರು ಅಂತ ಹೇಳಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬ ವೇದಿಕೆಗೆ ಬಂದು ಶರತ್ ಬಚ್ಚೇಗೌಡರ ಮೇಲೆ ಹಣದ ಸುರಿದಿದ್ದಾನೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಪಾಲಾಗುವ ಸಾಧ್ಯತೆ ಇದೆ. ಹೀಗಾಗಿ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಅನ್ನೋ ಮಾತುಗಳು ಕೂಡ ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಓಟುಗಳನ್ನು ಸೆಳೆಯಲು ಈ ತಂತ್ರ ಅನುಸರಿಸ್ತಿದ್ದಾರೆ ಅಂತಲೂ ಹೇಳಲಾಗ್ತಿದೆ.

 

Contact Us for Advertisement

Leave a Reply