masthmagaa.com:
ಶಿವಮೊಗ್ಗದ ಹುಣಸೋಡು ಬಳಿಯ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟಕ್ಕೆ ಸಂಬಂಧಿಸಿದಂತೆ ಕ್ವಾರಿ ಮಾಲೀಕ ಮತ್ತು ಡೈನಾಮೈಟ್ ಸಪ್ಲೈ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ ಅಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಘಟನೆಗೆ ಕ್ವಾರಿ ಮಾಲೀಕ ಮತ್ತು ಆಪರೇಟರ್ಗಳ ನಿರ್ಲಕ್ಷ್ಯ ಕೂಡ ಕಾರಣ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಪೊಲೀಸರು ಮತ್ತು ಜಿಲ್ಲಾಡಳಿತ ಸೇರಿಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪರಿಹಾರ ಘೋಷಣೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧಾರ ಕೈಗೊಳ್ತಾರೆ. ಪ್ರಾಥಮಿಕ ಮಾಹಿತಿ ಪ್ರಕಾರ 7 ಜನ ಮೃತಪಟ್ಟಿದ್ದಾರೆ. ಘಟನಾ ಸ್ಥಳವನ್ನ ಕ್ಲಿಯರ್ ಮಾಡಿದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ನೀಡಲು ಸಾಧ್ಯ ಅಂತ ಗೃಹ ಸಚಿವರು ಹೇಳಿದ್ದಾರೆ.
ಇನ್ನು ಸಿಎಂ ಯಡಿಯೂರಪ್ಪ ಮಾತನಾಡಿ, ಡೈನಾಮೈಟ್ ಸ್ಫೋಟದಲ್ಲಿ ಐವರು ಮೃತಪಟ್ಟಿದ್ದಾರೆ. ನಾಳೆ ನಾನು ಘಟನಾ ಸ್ಥಳಕ್ಕೆ ಹೋಗ್ತೀನಿ. ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸುತ್ತೇನೆ ಎಂದಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಛಿದ್ರ ಛಿದ್ರ ಆಗಿರೋದ್ರಿಂದ ಎಷ್ಟು ಜನ ಮೃತಪಟ್ಟಿದ್ದಾರೆ ಅನ್ನೋ ಬಗ್ಗೆ ಗೊಂದಲ ಮುಂದುವರಿದಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಇಬ್ಬರ ಮೃತದೇಹ ಸಿಕ್ಕಿದೆ ಅಂದ್ರೆ, ಮುಖ್ಯಮಂತ್ರಿಗಳು 5 ಜನ ಮೃತಪಟ್ಟಿದ್ದಾರೆ ಅಂತಿದ್ದಾರೆ, ಗೃಹ ಸಚಿವರು 7 ಜನ ಅಂತಿದ್ದಾರೆ.
-masthmagaa.com
Contact Us for Advertisement