ಪಶ್ಚಾತಾಪದಿಂದ ನನ್ನನ್ನು ಗುಂಡಿಕ್ಕಿ ಕೊಲ್ಲಿ: ಜೈನಮುನಿ ಹತ್ಯೆ ಆರೋಪಿ

masthmagaa.com:

ಚಿಕ್ಕೋಡಿ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಕೇಸ್‌ನಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನ ಕಸ್ಟಡಿಗೆ ತಗೊಂಡು ತನಿಖೆ ನಡೆಸುತ್ತಿದ್ದಾರೆ. ಇದೀಗ ವಿಚಾರಣೆ ವೇಳೆ ಪ್ರಮುಖ ಆರೋಪಿ ನಾರಾಯಣ ಮಾಳಿ, ನಂದು ತಪ್ಪಾಯ್ತು ನೀವೆ ನನ್ನ ಗುಂಡು ಹಾರಿಸಿ ಕೊಂದ್ಬಿಡಿ, ಇಲ್ಲ ನಾನೇ ಆತ್ಮಹತ್ಯೆ ಮಾಡಿಕೊಳ್ತೇನೆ ಅಂತ ಹೇಳಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅಲ್ದೆ ಜೈನಮುನಿಗಳ ಪರ್ಸನಲ್ ಡೈರಿಯನ್ನ ಸುಟ್ಟು ಹಾಕಿದ್ದಾಗಿ ನಾರಾಯಣ ಮಾಳಿ ಹೇಳಿದ್ದು, ಡೈರಿಯಲ್ಲಿ ಏನಿತ್ತು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ಇತ್ತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತ ಆರೋಪಿಸಿ ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಜೈನಮುನಿ ಹತ್ಯೆ ಕೇಸ್‌ನ್ನ CBI ಗೆ ಕೊಡ್ಬೇಕು ಅಂತ ಆಗ್ರಹಿಸಿದ್ದು, ರಾಜಭವನಕ್ಕೆ ಪಾದಯಾತ್ರೆ ಮೂಲಕ ತೆರಳಿ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ನಿರ್ದೇಶನ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಅಂತ ಮನವಿ ಸಲ್ಲಿಸಿದ್ದಾರೆ.

-masthmagaa.com

 

 

Contact Us for Advertisement

Leave a Reply