masthmagaa.com:
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸ್ತಾರೆ ಅನ್ನೊದು ಭಾರಿ ಚರ್ಚೆಯಾಗಿತ್ತು. ಇದೀಗ ಎಲ್ಲ ಅಂತೆ ಕಂತೆಗಳಿಗೆ ತೆರೆ ಎಳೆದಿರೊ ಸಿದ್ದರಾಮಯ್ಯ, ಕೋಲಾರ ಕ್ಷೇತ್ರದಿಂದ ಸ್ಪರ್ಧಿಸೋದಾಗಿ ಹೇಳಿದ್ದಾರೆ. ಕೋಲಾರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತಾಡಿದ ಸಿದ್ದರಾಮಯ್ಯ, ನಿಮ್ಮ ಅಭಿಮಾನವನ್ನ ತಿರಸ್ಕರಿಸೋಕೆ ಸಾಧ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ನಾನೇ ಅಭ್ಯರ್ಥಿ. ಆದರೆ ಕಾಂಗ್ರೆಸ್ನಲ್ಲಿ ಅಭ್ಯರ್ಥಿ ಆಯ್ಕೆಗೆ ಒಂದು ಪ್ರಕ್ರಿಯೆ ಇದೆ. ನನ್ನ ತೀರ್ಮಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಬೇಕಿದೆ. ಅವರ ನಿರ್ಧಾರಕ್ಕೆ ನಾನು ಬದ್ದ ಅಂತ ಹೇಳಿದ್ದಾರೆ. ಇತ್ತ ಇದಕ್ಕೆ ಪ್ರತಿಕ್ರಿಯೆ ನೀಡಿರೊ ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರದ್ದು ಇದು ಕೊನೆಯ ಚುನಾವಣೆ. ಆ ಮೇಲೆ ಕೋಲಾರಕ್ಕೂ ಸಿದ್ದರಾಮಯ್ಯ ಬೈಬೈ ಹೇಳಿ ಹೋಗ್ತಾರೆ. ಕೋಲಾರದಲ್ಲಿ ಜನರ ಆಶೀರ್ವಾದದಿಂದ ಜೆಡಿಎಸ್ ಅಭ್ಯರ್ಥಿ ಗೆಲ್ತಾರೆ. ನಮ್ಮ ಅಭ್ಯರ್ಥಿ ಗೆಲ್ಲುವ ಬಗ್ಗೆ ಸಂಪೂರ್ಣ ವಿಶ್ವಾಸ ಇದೆ ಅಂತ ಕುಮಾರಸ್ವಾಮಿ ಹೇಳಿದ್ದಾರೆ.
-masthmagaa.com
Contact Us for Advertisement