masthmagaa.com:
ರಾಜ್ಯದಲ್ಲಿ ತೀವ್ರ ಬರಗಾಲ ಇದ್ರೂ, ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ಘೋಷಣೆ ಮಾಡಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಲ್ಲದೆ ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಬರ ಪರಿಹಾರ ಕೊಡಿಸುವಂತೆ ಆರ್ಟಿಕಲ್ 32ರ ಅಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಇನ್ನು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ʻಬಿಜೆಪಿ ಮನೆ ಹಾಳಾಗ… ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವ್ರು ಭಾಗಿಯಾಗಿದ್ರಾ? ಭಾರತ ಮಾತೆಯ ಮಕ್ಕಳು ಅಂತಾರೆ…ನಾವೆಲ್ಲ ಭಾರತ ಮಾತೆಯ ಮಕ್ಕಳಲ್ವಾ? ನಾವೇನು ಸ್ವಾತಂತ್ರ ಹೋರಾಟ ಮಾಡಲಿಲ್ವಾ? ಸ್ವತಂತ್ರ ಪೂರ್ವದಲ್ಲೇ RSS ಇತ್ತು. ಆದ್ರೆ RSSನ ಒಬ್ರೂ ಕೂಡ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲಿಲ್ಲ. ನಿಜವಾದ ಭಾರತ ಮಾತೆ ಮಕ್ಕಳು ನಾವು ಅಂತೇಳಿದ್ದಾರೆ.
-masthmagaa.com
Contact Us for Advertisement