ಅನರ್ಹ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ದೆಹಲಿ: ಯಾವುದೇ ಕಾರಣಕ್ಕೂ ಪಕ್ಷಕ್ಕೆ ದ್ರೋಹ ಮಾಡಿದ ಅನರ್ಹ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿ ದ ಅವರು, ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುವುದಾಗಿ ಹೇಳಿದ್ದು ನಿಜ. ಆದ್ರೆ ಅನರ್ಹ ಶಾಸಕರನ್ನು ಉದ್ದೇಶಿಸಿ ಆ ಮಾತು ಹೇಳಿರಲಿಲ್ಲ.  ಬಿಜೆಪಿ ಶಾಸಕರು ಅಥವಾ ಮಾಜಿ ಶಾಸಕರು ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಬರಲಿ ಎಂದು ಹೇಳಿದ್ದೆ ಅಷ್ಟೆ ಎಂದಿದ್ದಾರೆ.

ಇದಕ್ಕೂ ಮುನ್ನ ವಿಪಕ್ಷ ನಾಯಕನಾದ ಬಳಿಕ ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಭೇಟಿಯಾಗಿ ಚರ್ಚೆ ನಡೆಸಿದ್ರು. ಈ ಬಗ್ಗೆ ಮಾತನಾಡಿ, ವಿಪಕ್ಷ ನಾಯಕನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಧನ್ಯವಾದ ತಿಳಿಸಲು ಬಂದಿದ್ದೆ ಎಂದಿದ್ದಾರೆ. ಆದ್ರೆ ಈ ಹಿಂದೆ ಸಿದ್ದರಾಮಯ್ಯ ದೆಹಲಿಗೆ ಹೋದಾಗ ಸೋನಿಯಾ ಗಾಂಧಿ ಭೇಟಿಗೂ ಅವಕಾಶ ಸಿಕ್ಕಿರಲಿಲ್ಲ. ಆದ್ರೆ ಈ ವೇಳೆ ಪರಮೇಶ್ವರ್ ಭೇಟಿಗೆ ಮಾತ್ರ ಸೋನಿಯಾ ಗಾಂಧಿ ಅವಕಾಶ ನೀಡಿದ್ದರು.

 

Contact Us for Advertisement

Leave a Reply