ಈ ಹಿಂದೆ ಬಳ್ಳಾರಿಗೆ ಪಾದಯಾತ್ರೆಗೆ ಕೈಗೊಂಡು ರೆಡ್ಡಿಗಳನ್ನು ನಡುಗಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಮತ್ತೊಂದು ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ. ನೆರೆ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ತಿಲ್ಲ. ಹೀಗಾಗಿ ಈಗ ಇದನ್ನೇ ಮುಂದಿಟ್ಟುಕೊಂಡು ಸಿದ್ದರಾಮಯ್ಯ ಬಾಗಲಕೋಟೆಯಿಂದ ಬೆಳಗಾವಿವರೆಗೆ ಸುಮಾರು 142 ಕಿಲೋಮೀಟರ್ಗಳ ಪಾದಯಾತ್ರೆ ನಡೆಸಲಿದ್ದಾರೆ. ಈ ಮೂಲಕ ಪಕ್ಷ ಸಂಘಟಿಸಲು ಪ್ಲಾನ್ ಮಾಡಿದ್ದಾರೆ. ಇದ್ರ ಜೊತೆಗೆ ಇದ್ರಿಂದ ಉಪಚುನಾವಣೆಗೂ ಸಹಕಾರವಾಗುತ್ತೆ ಅನ್ನೋದು ಸಿದ್ದರಾಮಯ್ಯ ಲೆಕ್ಕಾಚಾರ. ಹೀಗಾಗಿ ತಾವೇ ಪಾದಯಾತ್ರೆಯ ನೇತೃತ್ವ ವಹಿಸಿದ್ದಾರೆ. ಇದರಲ್ಲಿ ಪಕ್ಷದ ಇತರ ಮುಖಂಡರು ಕೂಡ ಭಾಗಿಯಾಗಲಿದ್ದಾರೆ.
Contact Us for Advertisement2019-10-24