masthmagaa.com:
ಕೊರೋನಾ ಹಾವಳಿಯಿಂದ ಬಂದ್ ಆಗಿದ್ದ ಕಾಲೇಜುಗಳನ್ನು ನವೆಂಬರ್ 17ರಿಂದ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡ ಬೆನ್ನಲ್ಲೇ ಅದರ ಬಗ್ಗೆ ಪರ-ವಿರೋಧದ ಚರ್ಚೆಗಳು ಕೂಡ ಶುರುವಾಗಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ‘ಎಲ್ಲರಿಗೂ ಕೊರೋನಾ ಲಸಿಕೆ ಹಾಕುವವರೆಗೆ ಕಾಲೇಜುಗಳನ್ನು ತೆರೆಯಬೇಡಿ. ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಬೇಡಿ. ಕಾಲೇಜುಗಳನ್ನ ಆರಂಭ ಮಾಡೋದು ಮೂರ್ಖತನದ ನಿರ್ಧಾರ’ ಅಂತ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಲವು ದಿನಗಳ ಹಿಂದೆ ಸಿದ್ದರಾಮಯ್ಯಗೂ ಕೊರೋನಾ ಸೋಂಕು ದೃಢಪಟ್ಟಿತ್ತು. ಬಳಿಕ ಗುಣಮುಖರಾಗಿ ಬಂದ ಅವರು ಇವತ್ತಿನವರೆಗೂ ಫೇಸ್ ಶೀಲ್ಡ್ ಮತ್ತು ಮಾಸ್ಕ್ ಧರಿಸಿಯೇ ಮನೆಯಿಂದ ಹೊರ ಬರ್ತಿದ್ದಾರೆ. ಸೋಂಕು ತಗುಲಿದ್ರೆ ಏನಾಗುತ್ತೆ ಅನ್ನೋದು ಅವರಿಗೆ ಚೆನ್ನಾಗಿ ಗೊತ್ತು. ಹೀಗಾಗಿ ಮಕ್ಕಳ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಹೀಗೆ ಹೇಳಿರಬಹುದು. ಅಥವಾ ಇದರಲ್ಲೂ ರಾಜಕೀಯ ಇದೆಯಾ ಗೊತ್ತಿಲ್ಲ.
-masthmagaa.com
Contact Us for Advertisement