ಕಟೀಲ್‌ ಹಾಗೂ ಡಿವಿ ಸದಾನಂದ ಫೋಟೋಗೆ ಚಪ್ಪಲಿ ಹಾರ! ಯಾಕೆ?

masthmagaa.com:

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನಿಂದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಪಕ್ಷದ ನಾಯಕರಿಗೆ ಚಪ್ಪಲಿ ಹಾರ ಹಾಕುವ ಮೂಲಕ ತಮ್ಮ ಸಿಟ್ಟನ್ನ ಹೊರಹಾಕಿದ್ದಾರೆ. ಪುತ್ತೂರಿನ ಬಸ್‌ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಡಿವಿ ಸದಾನಂದ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದಾರೆ. ʻಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿʼ ಅಂತ ಬ್ಯಾನರ್‌ನಲ್ಲಿ ಬರೆಯಲಾಗಿದೆ.

-masthmagaa.com

Contact Us for Advertisement

Leave a Reply