masthmagaa.com:
ಇತ್ತೀಚೆಗೆ ಚಿತ್ರರಂಗದಲ್ಲಿ ಬಯೋಪಿಕ್ ಟ್ರೆಂಡ್ ಹೆಚ್ಚಾಗಿದೆ. ಈ ತರದ ಚಿತ್ರ ಮಾಡಿ ಅನೇಕರು ಯಶಸ್ಸು ಕಂಡಿದ್ದಾರೆ. ಚಿತ್ರರಂಗ, ರಾಜಕೀಯ, ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಕುರಿತು ಬಯೋಪಿಕ್ಗಳು ಸಿದ್ಧಗೊಂಡಿವೆ. ಇದೀಗ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್ನ್ನ ತೆರೆಮೇಲೆ ತರೋಕೆ ಸಿದ್ದತೆ ನಡೆದಿದೆ. ಸುದ್ದಿ ಹರಿದು ಬಂದ ಬೆನ್ನಲ್ಲೇ ಸಿದ್ದರಾಮಯ್ಯನವ್ರ ಅಭಿಮಾನಿಗಳು ಖುಷಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದ ಹಯಾತ್ ಪೀರ್ ಸಾಬ್ ಅವರು ಎಂ.ಎಸ್. ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನ ತೆರೆಮೇಲೆ ತರಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಬಗ್ಗೆ ಸಿದ್ದರಾಮಯ್ಯ ಅವ್ರ ಜೊತೆ ಮೊದಲ ಹಂತದ ಮಾತುಕತೆ ನಡೆಸಲಾಗಿದೆ ಅಂತ ಹೇಳಲಾಗಿದೆ. ಇನ್ನು ಇವರ ಪಾತ್ರಕ್ಕೆ ತಮಿಳ್ನ ಪ್ರಸಿದ್ದ ನಟ ವಿಜಯ್ ಸೇತುಪತಿ ಅವ್ರನ್ನ ಕೇಳಲಾಗ್ತಿದೆ. ಸತ್ಯರತ್ನಂ ಅವರ ನಿರ್ದೇಶನದಲ್ಲಿ ಸಿನಿಮಾ ಮೂಡಿಬರಲಿದೆ ಅಂತ ಸುದ್ದಿಗಳು ಹರಿದಾಡ್ತಿವೆ. ಈ ವಿಚಾರ ಸದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.
-masthmagaa.com
Contact Us for Advertisement