ಸಿದ್ದರಾಮಯ್ಯ ಸಿಎಂ ಆಗಲಿ ಅಂತೇಳಿ ಪೇಚಿಗೆ ಸಿಲುಕಿದ ಶ್ರೀರಾಮುಲು!

masthmagaa.com:

ಸಿದ್ದರಾಮಯ್ಯ ಸಿಎಂ ಆದ್ರೆ ಸಂತೋಷಪಡುವವರ ಪೈಕಿ ನಾನೂ ಒಬ್ಬ ಅಂತ ಸಚಿವ ಶ್ರೀರಾಮುಲು ಸಮಾವೇಶವೊಂದರಲ್ಲಿ ಹೇಳಿಕೆ ನೀಡಿದ್ರು. ಇದೀಗ ಈ ವಿಚಾರವಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಇದಕ್ಕೆ ಸ್ಪಷ್ಟನೆ ಕೇಳಿದ್ದಾರೆ. ಇದ್ರ ಬೆನ್ನಲ್ಲೇ ಈ ಬಗ್ಗೆ ಮಾತನಾಡಿರೋ ರಾಮುಲು ಸಿದ್ದರಾಮಯ್ಯ ಸಿಎಂ ಆಗಲಿ ಅನ್ನೋ ಅರ್ಥದಲ್ಲಿ ನಾನು ಹೇಳಿಲ್ಲ. ಡಿಕೆಶಿ, ಅವರ ನಡುವಿನ ಜಗಳ ನೋಡಿ ನಾನು ಹೇಳಿದ್ದೇನೆ. ನಮ್ಮ ಪಕ್ಷಕ್ಕೆ ಬರಲಿ ಅಂತ ನಾನ್‌ ಹೇಳಿದ್ದು..ರಾಜ್ಯಾಧ್ಯಕ್ಷರಿಗೆ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದೇನೆ ಅಂತ ಹೇಳಿದ್ರು. ಇತ್ತ ಇದೇ ವಿಚಾರವನ್ನ ಇಟ್ಕೊಂಡು ಕಾಂಗ್ರೆಸ್‌ ಕೂಡ ಬಿಜೆಪಿಗೆ ಟೀಕಾಸ್ತ್ರ ಹೂಡಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆನ್ನುವುದು ಜನರ ಬಯಕೆಯಷ್ಟೇ ಅಲ್ಲ, ಬಿಜೆಪಿಯವರ ಬಯಕೆಯೂ ಕೂಡ. ಈ ಬಯಕೆ ರಾಮುಲು ಬಾಯಲ್ಲೇ ವ್ಯಕ್ತವಾಗಿದೆ. ಅವರ “ತಳ್ಳುವ ಸರ್ಕಾರದ” ಮೇಲೆ ಮಾಧುಸ್ವಾಮಿಯವರಂತೆ ಸಚಿವ ಶ್ರೀರಾಮುಲು ಅವರಿಗೂ ನಂಬಿಕೆ ಇಲ್ಲವಾಯ್ತಾ? ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಅಂತ ಬಿಜೆಪಿಗೆ ಸವಾಲೆಸೆದಿದೆ.

-masthmagaa.com

Contact Us for Advertisement

Leave a Reply