ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ.. ಪಿಯು ಪರೀಕ್ಷೆಯಲ್ಲಿ ಬದಲಾವಣೆ ಇಲ್ಲ..!

masthmagaa.com:

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಸಿಎಂ ಬಿ.ಎಸ್‌. ಯಡಿಯೂರಪ್ಪ ಈ ನಿರ್ಧಾರವನ್ನ ಪ್ರಕಟಿಸಿದರು.

ಮಾರ್ಚ್‌ 27 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಬೇಕಿತ್ತು. ಕೊರೋನಾ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಪರೀಕ್ಷೆಗಳು ಮುಂದೂಡಲ್ಪಟ್ಟಿದ್ದವು. ಆದ್ರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಲು ರಾಜ್ಯ ಸರ್ಕಾರ ಹಿಂದೇಟು ಹಾಕಿತ್ತು.

ಸರ್ಕಾರದ ನಿಲುವಿನಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲಕ್ಕೆ ಒಳಗಾಗಿದ್ದರು. ವಿದ್ಯಾರ್ಥಿಗಳ ಸುರಕ್ಷೆತೆಯ ದೃಷ್ಟಿಯಿಂದ ಪರೀಕ್ಷೆ ಮುಂದೂಡಬೇಕು ಅನ್ನೋ ಒತ್ತಾಯ ಕೇಳಿಬಂದಿತ್ತು. ಇದೀಗ ಕೊನೆಗೂ ಪರೀಕ್ಷೆಯನ್ನ ಮುಂದೂಡುವ ನಿರ್ಧಾರವನ್ನ ರಾಜ್ಯ ಸರ್ಕಾರ ಕೈಗೊಂಡಿದೆ.

ಆದರೆ ಮಾರ್ಚ್​ 23ರಂದು ಸೋಮವಾರ ನಡೆಯಲಿರುವ ಪಿಯು ಪರೀಕ್ಷೆ ಎಂದಿನಂತೆ ನಡೆಯಲಿದೆ ಅಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply