masthmagaa.com:
ರಾಜ್ಯ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿ ಸಿಬ್ಬಂದಿ ಕೈಗೆ ಬಳೆ ಹಾಕಿಕೊಳ್ಳದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿರೋದು ಭಾರಿ ಚರ್ಚೆಗೆ ಕಾರಣವಾಗಿದೆ. ನೂತನ ಮಾರ್ಗ ಸೂಚಿಗೆ ಅಡುಗೆ ಕಾರ್ಯಕರ್ತೆಯರು ಹಾಗೂ ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ, ಸುರಕ್ಷತೆ ಹಾಗೂ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ ಪಾಲಿಸಬೇಕಾದ ನಿಯಮಗಳ ಕುರಿತು ನೂತನ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಆದೇಶಿಸಿದೆ ಅಂತ ಹೇಳಲಾಗುತ್ತಿದೆ. ಆದ್ರೆ ಇದಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯನವರು ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನ ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗ ಸೂಚಿಯನ್ನು ಪ್ರಕಟಿಸಿದೆ ಅನ್ನೊ ಸುಳ್ಳು ಸುದ್ದಿಯನ್ನ ವ್ಯಾಪಕವಾಗಿ ಹರಡಲಾಗ್ತಿದೆ. ನಿಜ ಏನಂದ್ರೆ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement