masthmagaa.com:
ಬಡತನದಿಂದ ಒಂದೇ ಕುಟುಂಬದ ಐದು ಜನರು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ತುಮಕೂರಿನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಕರೀಬ್ ಸಾಬ್ ಅವ್ರು ಪತ್ರ ಬರೆದಿಟ್ಟಿದ್ದು, ಅದ್ರಲ್ಲಿ ಕೆಲವ್ರ ಹೆಸರನ್ನ ಉಲ್ಲೇಖ ಮಾಡಿದ್ದಾರೆ. ಅದರ ಆಧಾರದ ಮೇಲೆ 5 ಜನರನ್ನ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಮಾತಾಡಿದ್ದು, ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಮಾಡಿಕೊಂಡಿರೋ ಹಿಂದೆ ಬಡ್ಡಿ ವ್ಯವಹಾರ ಕಾರಣವಾಗಿದೆ ಅಂತ ಹೇಳಲಾಗ್ತಿದೆ. ಹೀಗಾಗಿ ಬಡ್ಡಿ ವ್ಯವಹಾರ ನಡೆಸೋರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ತೇವೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement