masthmagaa.com:
ಈ ಬಾರಿ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದಿರೊ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಷ್, ತಮ್ಮ ಬೆಂಬಲಿಗರೊಂದಿಗೆ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಸುಮಲತಾ ಕಮಲ ಪಡೆಗೆ ಜಾಯಿನ್ ಆಗಿದ್ದಾರೆ. ಇದೇ ವೇಳೆ ಮಾಜಿ ಕ್ರಿಕೆಟರ್ ದೊಡ್ಡ ಗಣೇಶ್ ಹಾಗೂ ಕೊಪ್ಪಳದ ಮಾಜಿ ಸಂಸದ ಶಿವರಾಮಗೌಡ ಕೂಡ ಬಿಜೆಪಿ ಸೇರಿದ್ದಾರೆ.
-masthmagaa.com
Contact Us for Advertisement