ಬಿಜೆಪಿ ಪರ ಪ್ರಚಾರದ ವೇಳೆ ಕಾಂಗ್ರೆಸ್‌ಗೆ ಕ್ಷಮೆಯಾಚಿಸಿದ ಸುಮಲತಾ ಅಂಬರೀಶ್!‌ ಯಾಕೆ?

masthmagaa.com:

ಚುನಾವಣಾ ಭಾಗವಾಗಿ ಬಿಜೆಪಿ ಅಭ್ಯರ್ಥಿ ಪರ ಮಂಡ್ಯದ ನಾಗಮಂಗಲದಲ್ಲಿ ಪ್ರಚಾರ ಮಾಡ್ತಿದ್ದ ವೇಳೆ ಸಂಸದೆ ಸುಮಲತಾ ಅಂಬರೀಶ್‌, ಕಾಂಗ್ರೆಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸಿದ್ದಾರೆ. 27 ವರ್ಷಗಳ ಕಾಲ ಅಂಬರೀಶ್‌ ಕಾಂಗ್ರೆಸ್‌ನಲ್ಲಿ ಸಕ್ರಿಯರಾಗಿದ್ರು. ಅಂಬರೀಶ್‌ ನಿಧನದ ಬಳಿಕ ನನಗೆ ಕಾಂಗ್ರೆಸ್‌ನಲ್ಲಿ ಅವಕಾಶ ಸಿಗಲಿಲ್ಲ. ನನ್ನ ಗೆಲುವಿಗೆ ಬಿಜೆಪಿ, ಕಾಂಗ್ರೆಸ್‌ ರೈತ ಸಂಘ ಕಾರಣ. ಬದಲಾದ ಕಾಲದಲ್ಲಿ ರಾಜಕೀಯ ತೀರ್ಮಾನ ಕೈಗೊಳ್ಳಬೇಕಾಯ್ತು. ನನ್ನ ನಡೆಯಿಂದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಬೇಸರವಾಗಿದ್ರೆ ಕ್ಷಮೆ ಇರಲಿ ಎಂದಿದ್ದಾರೆ.

-masthmagaa.com

Contact Us for Advertisement

Leave a Reply