masthmagaa.com:
ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಮತ್ತು ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರ ನಡುವಿನ ಮಾತಿನ ಸಮರ ಸದ್ಯಕ್ಕೆ ನಿಲ್ಲೋ ಲಕ್ಷಣ ಕಾಣ್ತಿಲ್ಲ. ಜೆಡಿಎಸ್ ನಾಯಕರು ಅಂಬರೀಷ್ ಹೆಸರು ಬಳಸುತ್ತಿರೋ ಬಗ್ಗೆ ಅಸಮಾಧಾನ ಹೊರಹಾಕಿದ ಸುಮಲತಾ ಇವತ್ತು ಭಾವುಕರಾದ್ರು. ಇನ್ನು ಸುಮಲತಾ ಪರ ಇವತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮಾತನಾಡಿದ್ರು. ಇದೇ ವೇಳೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಇನ್ನು ಸುಮಲತಾ ವಿರುದ್ಧ ಜೆಡಿಎಸ್ ನಾಯಕರ ವಾಗ್ದಾಳಿ ಇವತ್ತು ಕೂಡ ಮುಂದುವರಿದಿತ್ತು. ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಮಾತನಾಡಿ, ಮಂಡ್ಯ ಜಿಲ್ಲೆಗೆ ಅಂಬರೀಶ್ ಏನೂ ಮಾಡಿಲ್ಲ. ಆಕಸ್ಮಿಕವಾಗಿ ಸುಮಲತಾ ಮಂಡ್ಯ ಸಂಸದೆ ಆಗಿದ್ದಾರೆ. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದಿದ್ದಾರೆ.
-masthmagaa.com
Contact Us for Advertisement