ಕಾವೇರಿ ವಿವಾದ: ನೀರು ಹಂಚಿಕೆ ಕುರಿತು ವರದಿ ಸಲ್ಲಿಸುವಂತೆ ಕಾವೇರಿ ಪ್ರಾಧಿಕಾರಕ್ಕೆ ಸುಪ್ರೀಂ ಸೂಚನೆ

masthmagaa.com:

ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಕಾವೇರಿ ಪ್ರಾಧಿಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ. ಕೆಆರ್‌ಎಸ್‌ ಅಣೆಕಟ್ಟು ಹಾಗೂ ಕಬಿನಿ ಜಲಾಶಯಗಳ ನೀರಿನ ಮಟ್ಟದ ವರದಿಯನ್ನು ಸಲ್ಲಿಸಬೇಕು. ಜೊತೆಗೆ ಕಾವೇರಿ ನದಿ ನೀರು ಬಿಡುಗಡೆಯ ಸಂಬಂಧ 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನ ಫಾಲೋ ಮಾಡಲಾಗ್ತಿದ್ಯಾ ಇಲ್ವಾ ಅನ್ನೋದ್ರ ಬಗ್ಗೆ ಪ್ರಾಧಿಕಾರದ ವರದಿ ಸಲ್ಲಿಸಬೇಕು ಅಂತ ನ್ಯಾಯಮೂರ್ತಿ ಬಿ. ಆರ್‌ ಗವಾಯಿ ನೇತೃತ್ವದ ಪೀಠ ಹೇಳಿದೆ. ಇನ್ನು ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್‌ 1ಕ್ಕೆ ಮುಂದೂಡಿದೆ.

 

-masthmagaa.com

Contact Us for Advertisement

Leave a Reply