masthmagaa.com:
ಹೈಕೋರ್ಟ್ ವಿಧಿಸಿದ್ದ 10,000 ರೂಪಾಯಿ ದಂಡ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಇದೀಗ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ವಿಧಿಸಿರೋ 10 ಸಾವಿರ ರೂಪಾಯಿ ದಂಡ ಹಾಗೂ FIR ರದ್ದತಿ ವಿಚಾರವಾಗಿ ಸುಪ್ರೀಂಗೆ ಸಿಎಂ ಮೇಲ್ಮನವಿ ಸಲ್ಲಿಸಿದ್ರು. ಇನ್ನು ಸೋಮವಾರ ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮುಂದಿನ ಆದೇಶದವೆರೆಗೆ ಹೈ ಕೋರ್ಟ್ ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ. ಅಲ್ದೇ ಮಾರ್ಚ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಅಂದ್ಹಾಗೆ 2022ರಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಕ್ಕಾಗಿ ಹೈಕೋರ್ಟ್, ಸಿಎಂ ಸೇರಿದಂತೆ ಇತರೆ ಕೈ ನಾಯಕರಿಗೆ 10 ಸಾವಿರ ರೂ ದಂಡ ವಿಧಿಸಿತ್ತು. ಇದೀಗ ಈ ಪ್ರಕರಣದ ವಿಚಾರವಾಗಿ ಸುಪ್ರೀಂಕೋರ್ಟ್ ಸಿಎಂಗೆ ತಾತ್ಕಾಲಿಕ ರಿಲೀಫ್ ನೀಡಿದೆ.
-masthmagaa.com
Contact Us for Advertisement