masthmagaa.com:
ಕೊಲ್ಕತ್ತಾ ಹೈಕೋರ್ಟ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ ಅವ್ರ ಪಶ್ಚಿಮ ಬಂಗಾಳದ ಸರ್ಕಾರಕ್ಕೆ ಸದ್ಯ ಬಿಗ್ ರಿಲೀಫ್ ಸಿಕ್ಕಿದೆ. ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದ ತನಿಖೆಯನ್ನ CBI ತನಿಖೆ ನಡೆಸಲು ಇದೀಗ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಹೇರಿದೆ. ಅಂದ್ಹಾಗೆ ಈ ಹಗರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಪಾತ್ರ ಇದ್ಯೋ… ಇಲ್ವೋ ಅನ್ನೋ ಬಗ್ಗೆ ತನಿಖೆ ನಡೆಸಲು ಕೊಲ್ಕತ್ತಾ ಹೈಕೋರ್ಟ್ CBIಗೆ ನಿರ್ದೇಶನ ನೀಡಿತ್ತು. ಇದೀಗ ಹೈಕೋರ್ಟ್ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ತಡೆಯೊಡ್ಡಿದೆ.
-masthmagaa.com
Contact Us for Advertisement