masthmagaa.com:
ಅನರ್ಹ ಶಾಸಕ ಮುನಿರತ್ನ ಅವರ ಶಾಸಕತ್ವ ರದ್ದು ಮಾಡಿ, ಆರ್.ಆರ್. ನಗರ ಉಪಚುನಾವಣೆಯನ್ನ ಮುಂದೂಡುವಂತೆ ಬಿಜೆಪಿಯ ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಈ ಮೂಲಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಜೊತೆಗೆ ಮುಂಬರುವ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಸ್ಪರ್ಧಿಸಲು ಅವರ ದಾರಿ ಕೂಡ ಸುಗಮವಾಗಿದೆ.
ಈ ಹಿಂದೆ ತುಳಸಿ ಮುಜಿರಾಜು ಸಲ್ಲಿಸಿದ್ದ ಅರ್ಜಿಯನ್ನ ಕಲಬುರ್ಗಿ ಹೈಕೋರ್ಟ್ ಪೀಠ ವಜಾಗೊಳಿಸಿತ್ತು. ಬಳಿಕ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದ್ರೀಗ ಸುಪ್ರೀಂಕೋರ್ಟ್ ಅರ್ಜಿಯನ್ನು ವಜಾ ಮಾಡಿದೆ. ಅಂದ್ಹಾಗೆ 2018ರ ವಿಧಾನಸಭೆ ಚುನಾವಣೆ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಸಾವಿರಾರು ನಕಲಿ ವೋಟರ್ ಐಡಿ ಕಾರ್ಡ್ಗಳು ಪತ್ತೆಯಾಗಿದ್ದವು. ಆದರೂ ಚುನಾವಣೆ ನಡೆದು ಕಾಂಗ್ರೆಸ್ನ ಮುನಿರತ್ನ ಗೆಲುವು ಸಾಧಿಸಿದ್ದರು. ಬಳಿಕ ಬಿಜೆಪಿಯ ತುಳಸಿ ಮುನಿರಾಜು ಕೋರ್ಟ್ ಮೆಟ್ಟಿಲೇರಿದ್ರು. ಇದರ ನಡುವೆ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುನಿರತ್ನ ಬಿಜೆಪಿ ಸೇರಿಕೊಂಡರು. ಆದರೂ ಮುನಿರತ್ನ ವಿರುದ್ಧದ ಕಾನೂನು ಹೋರಾಟವನ್ನ ಮುನಿರಾಜು ನಿಲ್ಲಿಸಿರಲಿಲ್ಲ.
ನವೆಂಬರ್ 3ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರಿನ ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಆರ್.ಆರ್. ನಗರದಲ್ಲಿ ಬಿಜೆಪಿ ಟಿಕೆಟ್ ಮುನಿರತ್ನ ಅವರಿಗೆ ಸಿಗುವ ಎಲ್ಲಾ ಸಾಧ್ಯತೆಗಳಿವೆ. ಒಂದ್ವೇಳೆ ಮುನಿರತ್ನಗೆ ಟಿಕೆಟ್ ಸಿಕ್ಕರೆ ಅವರ ಪರವಾಗಿ ಬಿಜೆಪಿಯ ತುಳಸಿ ಮುನಿರಾಜುಗೌಡ ಪ್ರಚಾರ ಮಾಡುತ್ತಾರಾ ಅನ್ನೋ ಪ್ರಶ್ನೆ ಮೂಡಿದೆ.
-masthmagaa.com
Contact Us for Advertisement