masthmagaa.com:
‘ಆತ್ಮಹತ್ಯೆ ಮಾಡಿಕೊಂಡ ಸುಶಾಂತ್ ಸಿಂಗ್ ರಜಪೂತ್ ರಜಪೂತನೇ ಅಲ್ಲ’ ಅಂತ ಬಿಹಾರದ ಆರ್ಜೆಡಿ ಶಾಸಕ ಅರುಣ್ ಯಾದವ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ‘ಮಹಾರಾಣಾ ಪ್ರತಾಪ್ ಅವರ ವಂಶಸ್ಥರು ಆತ್ಮಹತ್ಯೆ ಮಾಡಿಕೊಂಡು ಸಾಯಲು ಸಾಧ್ಯವಿಲ್ಲ. ಹೀಗಾಗಿ ಸುಶಾಂತ್ ಸಿಂಗ್ ರಜಪೂತ್ ರಜಪೂತನಲ್ಲ. ಅವರು ಆತ್ಮಹತ್ಯೆ ಮಾಡಿಕೊಳ್ಳಬಾರದಿತ್ತು. ರಜಪೂತ ಸಮುದಾಯಕ್ಕೆ ಸೇರಿದ್ದ ಅವರು ಹೋರಾಟ ಮಾಡಬೇಕಿತ್ತು’ ಅಂತ ಅರುಣ್ ಯಾದವ್ ಹೇಳಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಇಂತಹ ಸಂದರ್ಭದಲ್ಲೇ ಆರ್ಜೆಡಿ ಶಾಸಕರೊಬ್ಬರು ಈ ರೀತಿ ಹೇಳಿಕೆ ಕೊಟ್ಟಿರೋದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಆರ್ಜೆಡಿ ಶಾಸಕನ ವಿರುದ್ಧ ಆಡಳಿತ ಪಕ್ಷಗಳಾದ ಜೆಡಿಯು ಮತ್ತು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿವೆ. ಅಂದ್ಹಾಗೆ ವರ್ಷಾಂತ್ಯದಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಬಿಹಾರದ ಮೂಲದವರೇ ಆಗಿದ್ದ ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರವನ್ನ ವಿವಿಧ ಪಕ್ಷಗಳು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿವೆ ಅನ್ನೋದು ಗಮನಾರ್ಹ.
-masthmagaa.com
Contact Us for Advertisement