masthmagaa.com:
ದೆಹಲಿ: ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶದ ಬಳಿಕ ಫೀಲ್ಡಿಗೆ ಎಂಟ್ರಿ ಕೊಟ್ಟಿರುವ ಸಿಬಿಐ ತನಿಖೆ ಚುರುಕುಗೊಳಿಸಿದೆ. ಸುಶಾಂತ್ ಮರಣೋತ್ತರ ಪರೀಕ್ಷೆ ಸರಿಯಾಗಿ ನಡೆದಿಲ್ಲ.. ಅಥವಾ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಗೋಲ್ಮಾಲ್ ಮಾಡಲಾಗಿದೆ ಅಂತ ಸಿಬಿಐಗೆ ಅನುಮಾನವಿದೆ. ಹೀಗಾಗಿ ಮರಣೋತ್ತರ ಪರೀಕ್ಷೆ ನಡೆಸಿರುವ ವೈದ್ಯರ ತಂಡ ಮತ್ತು ಮುಂಬೈ ಪೊಲೀಸರನ್ನು ಸಿಬಿಐ ವಿಚಾರಣೆಗೆ ಒಳಪಡಿಸಲಿದೆ. ಜೊತೆಗೆ ಮರಣೋತ್ತರ ಪರೀಕ್ಷಾ ವರದಿಯ ಪುನರ್ ಪರಿಶೀಲನೆ ನಡೆಸಲು ಏಮ್ಸ್ನ ನಾಲ್ವರು ಸದಸ್ಯರನ್ನೊಳಗೊಂಡ ವಿಧಿ ವಿಜ್ಞಾನ ತಂಡವನ್ನು ರಚಿಸಲಾಗಿದೆ.
-masthmagaa.com
Contact Us for Advertisement