masthmagaa.com:

ಬಿಹಾರ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಬಗ್ಗೆ ಅವರ ಕುಟುಂಬಸ್ಥರಲ್ಲಿ ಅನುಮಾನ ಮೂಡಿದೆ. ಸುಶಾಂತ್ ಸಿಂಗ್ ರಜಪೂತ್​ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಪೊಲೀಸರು ಪ್ರಕರಣದ ತನಿಖೆ ನಡೆಸಬೇಕು. ಆತನ ಸಾವಿನ ಹಿಂದೆ ಸಾಕಷ್ಟು ಅನುಮಾನಗಳಿವೆ. ಅವನನ್ನು ಕೊಲೆ ಮಾಡಲಾಗಿದೆ ಅಂತ ಸುಶಾಂತ್ ಅವರ ಅಂಕಲ್​ ಹೇಳಿದ್ದಾರೆ.

ಮತ್ತೊಬ್ಬ ಸಂಬಂಧಿ ಮತ್ತು ಬಿಹಾರ ಬಿಜೆಪಿ ಶಾಸಕರಾಗಿರುವ ನೀರಜ್ ಕುಮಾರ್ ಸಿಂಗ್ ಬಬ್ಲೂ ಮಾತನಾಡಿದ್ದು, ಸುಶಾಂತ್ ಸಿಂಗ್ ರಜಪೂತ್ ಇಲ್ಲ ಅನ್ನೋದನ್ನ ನಂಬೋಕೆ ಆಗ್ತಿಲ್ಲ. ಅಗತ್ಯವಿದ್ದರೆ ತನಿಖೆ ನಡೆಸಲು ಆಗ್ರಹಿಸುತ್ತೇವೆ ಎಂದಿದ್ದಾರೆ.

ಇನ್ನು ಜನ್​ ಅಧಿಕಾರ್ ಪಕ್ಷದ ಮುಖ್ಯಸ್ಥ ಪಪ್ಪು ಯಾದವ್  ಪ್ರಕಾರ, ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಅವನನ್ನು ಕೊಲೆ ಮಾಡಲಾಗಿದೆ. ಹೀಗಾಗಿ ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಯಬೇಕು ಎಂದಿದ್ದಾರೆ.

ಬಿಹಾರದ ಪಾಟ್ನಾದಲ್ಲಿದ್ದ ಸುಶಾಂತ್ ಸಿಂಗ್​ ಅವರ ತಂದೆ ಮತ್ತು ಕುಟುಂಬಸ್ಥರು ಮುಂಬೈಗೆ ಹೊರಟಿದ್ದು, ಮುಂಬೈನಲ್ಲೇ ಅಂತ್ಯ ಸಂಸ್ಕಾರ ನಡೆಸಲು ನಿರ್ಧರಿಸಿದ್ದಾರೆ. ಇತ್ತ ಮುಂಬೈನ ಡಾ.ಆರ್​.ಎನ್. ಕೂಪರ್ ಮುನಿಸಿಪಲ್ ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.

-masthmagaa.com

Contact Us for Advertisement

Leave a Reply