masthmagaa.com: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಬಂದು ಹೋದ ಬೆನ್ನಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು, ಬಿ.ಎಸ್ ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಬೃಹತ್ ವೇದಿಕೆ ಸಿದ್ದವಾಗಿದೆ. ಕೃಷಿ ಇಲಾಖೆ ವೇದಿಕೆಯ ಮುಂಭಾಗವನ್ನು ಸಿರಿಧಾನ್ಯಗಳಿಂದ ಸಿಂಗಾರ ಮಾಡಲಾಗಿದೆ. ಹಾಗೇ ಪಿಎಂ ಕಿಸಾನ್, ಜಿ 20, ಅಂತರಾಷ್ಟ್ರೀಯ ಮಟ್ಟದ ಮಿಲೇಟ್ಸ್ ವರ್ಷದ ಚಿತ್ರಣಗಳ ಮೂರು ಲೋಗೋಗಳನ್ನ ಸಿರಿ ಧಾನ್ಯದಲ್ಲಿ ಬಿಡಿಸಲಾಗಿದೆ. -masthmagaa.com Share on: WhatsAppContact Us for AdvertisementRead More →

masthmagaa.com: ಗುಜರಾತ್‌ ಚುನಾವಣೆ ಮುಕ್ತಾಯವಾಗ್ತಿದ್ದಂತೆ ಉಳಿದ ರಾಜ್ಯಗಳಲ್ಲಿ ಪಕ್ಷವನ್ನ ಬಲಪಡಿಸೋಕೆ ಮುಂದಾಗಿರೊ ಬಿಜೆಪಿ ದಿಲ್ಲಿಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಆಯೋಜಿಸಿದೆ. ನಿನ್ನೆ ಹಾಗೂ ಇವತ್ತು 2 ದಿನಗಳ ಕಾಲ ನಡೆದ ಸಭೆಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಪಕ್ಷದ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವು ಪ್ರಮುಖ ನಾಯಕರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ತವರು ಚುನಾವಣೆ ಬಳಿಕ ಕರ್ನಾಟಕದತ್ತ ಮೋದಿ-ಅಮಿತ್‌ ಶಾ ಚಿತ್ತ ನೆಟ್ಟಿದ್ದು, ದಿಲ್ಲಿಯಲ್ಲಿ ನಡೆದ ಸಭೆಗೆ ವಿಶೇಷ ಮಹತ್ವ ಪಡೆದುಕೊಂಡಿದೆ. -masthmagaa.com Share on: WhatsAppContact Us for AdvertisementRead More →

masthmagaa.com: ಬೆಳಗಾವಿ ಗಡಿ ವಿವಾದದ ನಡುವೆಯೇ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ದೆಹಲಿಗೆ ತೆರಳ್ತಾ ಇದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವ್ರ ಭೇಟಿಗೆ ಸದ್ಯದಲ್ಲೇ ದೆಹಲಿಗೆ ತೆರಳ್ತಾ ಇದ್ದೀನಿ. ಇದೇ ವೇಳೆ ಸುಪ್ರೀಂಕೋರ್ಟ್‌ ವಕೀಲರನ್ನ ಭೇಟಿಯಾಗಿ ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡ್ತೀನಿ ಅಂತ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಬೊಮ್ಮಾಯಿ ಅವ್ರ ದೆಹಲಿ ಪ್ರವಾಸದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗೋ ಸಾಧ್ಯತೆ ಇದೆ. ವಿಧಾನಸಭೆ ಚುನಾವಣೆ ದೃಷ್ಟಿಯಿಂದ, ಖಾಲಿ ಇರುವ 6 ಸ್ಥಾನಗಳನ್ನ ತುಂಬಿ, ಹೊಸ ಮುಖಗಳಿಗೆ ಅವಕಾಶ ನೀಡೋ ಸಾಧ್ಯತೆ ಇದೆ ಅಂತ ಹೇಳಲಾಗ್ತಿದೆ. -masthmagaa.com Share on: WhatsAppContact Us for AdvertisementRead More →