masthmagaa.com:
ಲೋಕಸಭೆ ಟಿಕೆಟ್ ಕೈ ತಪ್ಪಿದ ವಿಚಾರವಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡಿನ ಸಂಸದರೊಬ್ರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈರೋಡ್ ಕ್ಷೇತ್ರದ MDMK ಪಕ್ಷದ ಸಂಸದ ಗಣೇಶಮೂರ್ತಿ ಈ ಬಾರಿ ಲೋಕಸಭೆಗೆ ತಮ್ಮ ಪಕ್ಷದಿಂದ ಟಿಕೆಟ್ ಸಿಗದ ಕಾರಣ 4 ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ರು. ಹಾಗಾಗಿ ಅವ್ರನ್ನ ಕೊಯಿಮತ್ತೂರ್ನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದ್ರೆ ಅವ್ರು ಈಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಅಂತ ಗೊತ್ತಾಗಿದೆ.
-masthmga
Contact Us for Advertisement