masthmagaa.com:
ಮಣಿಪುರದ ಚುರಾಚಂದ್ಪುರನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್ ಅವರು ಉದ್ಘಾಟಿಸಬೇಕಿದ್ದ ಜಿಮ್ ಹಾಗೂ ಕ್ರೀಡಾ ಮೂಲಸೌಕರ್ಯಗಳಿಗೆ ಉದ್ರಿಕ್ತ ಗುಂಪೊಂದು ಬೆಂಕಿ ಹಚ್ಚಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಇಂಟರ್ನೆಟ್ ಸೇವೆಯನ್ನ ಸ್ಥಗಿತಗೊಳಿಸಲಾಗಿದೆ. ಸೆಕ್ಷನ್ 144 ಜಾರಿ ಮಾಡಲಾಗಿದೆ. ಅಲ್ಲಿನ ಸ್ಥಳೀಯ ಬುಡಕಟ್ಟು ಸಂಘಟನೆಯೊಂದು ಈ ಹಿಂಸಾಚಾರ ನಡೆಸುತ್ತಿದ್ದು, ಸರ್ಕಾರದ ಸಂರಕ್ಷಿತ ಮೀಸಲು ಅರಣ್ಯ ಹಾಗೂ ಕೆರೆಗಳ ಸಮೀಕ್ಷೆಯನ್ನ ವಿರೋಧಿಸುತ್ತಿದೆ ಅಂತ ಹೇಳಲಾಗ್ತಿದೆ.
-masthmagaa.com
Contact Us for Advertisement