masthmagaa.com:
ಕಳೆದ ಕೆಲ ದಿನಗಳಿಂದ ತೆಲಂಗಾಣದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಬರೋಬ್ಬರಿ 5,000 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಅಂತ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು ಕೇಂದ್ರ ಸರ್ಕಾರ 1,350 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕು ಅಂತ ಆಗ್ರಹಿಸಿದ್ದಾರೆ.
ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹಕ್ಕೆ ಸಿಲುಕಿ 32ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಅಂತ ಸರ್ಕಾರ ಹೇಳಿದೆ. ಅದ್ರಲ್ಲೂ ಹೈದರಾಬಾದ್ ಒಂದರಲ್ಲೇ 25 ಜನ ಸಾವನ್ನಪ್ಪಿದ್ದಾರೆ. ಸದ್ಯ ವಾಯುಭಾರ ಕುಸಿತವು ಮಧ್ಯ ಮತ್ತು ದಕ್ಷಿಣ ಮಹಾರಾಷ್ಟ್ರದಲ್ಲಿ ಕೇಂದ್ರೀಕೃತವಾಗಿದ್ದು ಪುಣೆ ಸೇರಿದಂತೆ ಮಹಾರಾಷ್ಟ್ರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.
-masthmagaa.com
Contact Us for Advertisement