ಕಿಚ್ಚ ಸುದೀಪ್‌ ಜೊತೆ ಬಿಜೆಪಿ ಪರ ಪ್ರಚಾರ ಮಾಡಲಿರುವ ತೆಲುಗಿನ ಸೂಪರ್‌ ಸ್ಟಾರ್ ಪವನ್ ಕಲ್ಯಾಣ್ ?

masthmagaa.com:

ತೆಲುಗಿನ ಸ್ಟಾರ್ ನಟ ಪವನ್ ಕಲ್ಯಾಣ್ ಕರ್ನಾಟಕದ ವಿಧಾನಸಭಾ​ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಕರ್ನಾಟಕಕ್ಕೆ ಬರುತ್ತಿದ್ದಾರೆ. ಪವನ್ ಕಲ್ಯಾಣ್ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ ಪರ ಪ್ರಚಾರಕ್ಕಿಳಿಯಲಿದ್ದಾರೆ. ಇತ್ತೀಚೆಗೆ ನೀಡಿರುವ ಸಂದರ್ಶನದಲ್ಲಿ ಪವನ್ ಕಲ್ಯಾಣ್ ನನ್ನ ಪರವಾಗಿ ಪ್ರಚಾರಕ್ಕೆ ಬರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ ಹೇಳಿದ್ದಾರೆ. ತೆಲುಗಿನ ನಟ ಪವನ್ ಕಲ್ಯಾಣ್​ಗೆ ಕರ್ನಾಟದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅದರಲ್ಲಿಯೂ ಆಂಧ್ರ ಗಡಿ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರಗಳಲ್ಲಂತೂ ಪವನ್​ ಕಲ್ಯಾಣ್​ ಅವರ ವೀರಾಭಿಮಾನಿಗಳೇ ಇದ್ದಾರೆ. ಇದೇ ಕಾರಣಕ್ಕೆ ಕಳೆದ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಪವನ್ ಕಲ್ಯಾಣ್ ಈ ಭಾಗದಲ್ಲಿ ಕೆಲವರ ಪರವಾಗಿ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದರು. ಇದೀಗ ಈ ಬಾರಿಯೂ ಪವನ್ ಕಲ್ಯಾಣ್ ಬಿಜೆಪಿ ಪರ ಚುನಾವಣೆ ಪ್ರಚಾರಕ್ಕಿಳಿದು, ಸುದೀಪ್‌ ಜೊತೆ ಕೈಜೋಡಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

-masthmagaa.com

Contact Us for Advertisement

Leave a Reply