ಉತ್ತರ ಪ್ರದೇಶದಲ್ಲಿ ʻದಿ ಕೇರಳ ಸ್ಟೋರಿʼ ಸಿನಿಮಾ ತೆರಿಗೆ ಮುಕ್ತ – ಯೋಗಿ ಆದಿತ್ಯನಾಥ !

masthmagaa.com:

ʻದಿ ಕೇರಳ ಸ್ಟೋರಿʼ ಸಿನಿಮಾ ದೇಶದಲ್ಲಿ ಬಹಳಷ್ಟು ಸದ್ದು ಮಾಡುತ್ತಿದೆ. ದೇಶದಲ್ಲಿ ಕೆಲವೊಂದು ರಾಜ್ಯಗಳು ಸಿನಿಮಾಕ್ಕೆ ಬೆಂಬಲ ನೀಡಿದರೆ, ಕೆಲವೊಂದು ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ನಿನ್ನಯಷ್ಟೇ ಮಧ್ಯಪ್ರದೇಶದಲ್ಲಿ ʻದಿ ಕೇರಳ ಸ್ಟೋರಿʼ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಘೋಷಿಸಲಾಗಿತ್ತು. ಇದೀಗ ಉತ್ತರ ಪ್ರದೇಶದಲ್ಲಿಯೂ ಸಹ ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಟ್ವೀಟ್‌ ಮಾಡಿದ್ದಾರೆ. ಯುಪಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಬರೆದುಕೊಂಡಿದ್ದಾರೆ. ಯುಪಿ ಬಿಜೆಪಿ ಕಾರ್ಯದರ್ಶಿ ರಾಘವೇಂದ್ರ ಮಿಶ್ರಾ ಅವರು ಇತ್ತೀಚೆಗೆ ಲಕ್ನೋದಲ್ಲಿ 100 ವಿದ್ಯಾರ್ಥಿನಿಯರಿಗೆ ಸಿನಿಮಾವನ್ನು ತೋರಿಸಿದ್ದರು. ಮಧ್ಯಪ್ರದೇಶದಲ್ಲೂ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಿದ ನಂತರ ‘ತೆರಿಗೆ ಮುಕ್ತ’ ಮಾಡಿದ ಎರಡನೇ ರಾಜ್ಯ ಉತ್ತರ ಪ್ರದೇಶವಾಗಿದೆ .

-masthmagaa.com

 

Contact Us for Advertisement

Leave a Reply