masthmagaa.com:
ದೆಹಲಿಯಲ್ಲಿ ಏಪ್ರಿಲ್ 20ರ ಬಳಿಕವೂ ಲಾಕ್ಡೌನ್ನಲ್ಲಿ ಯಾವುದೇ ವಿನಾಯಿತಿ ನೀಡೋದಿಲ್ಲ ಅಂತ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಜನರ ರಕ್ಷಣೆ ನಮ್ಮ ಜವಾಬ್ದಾರಿ. ಹೀಗಾಗಿ ಈಗ ಇರುವ ರೀತಿಯಲ್ಲೇ ಲಾಕ್ಡೌನ್ ಮುಂದುವರಿಯಲಿದೆ. ಹೊಸದಾಗಿ ಯಾವ ಕ್ಷೇತ್ರಕ್ಕೂ ವಿನಾಯಿತಿ ನೀಡಲ್ಲ. ಒಂದು ವಾರದ ಬಳಿಕ ತಜ್ಞರ ಜೊತೆ ಮತ್ತೊಮ್ಮೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಅಂತ ಕೇಜ್ರಿವಾಲ್ ಹೇಳಿದ್ದಾರೆ.
ಇತ್ತೀಚೆಗಷ್ಟೇ ಮೇ 3ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿದ್ದ ಕೇಂದ್ರ ಸರ್ಕಾರ, ಏಪ್ರಿಲ್ 20ರ ಬಳಿಕ ಕೆಲವೊಂದು ಕ್ಷೇತ್ರಗಳಿಗೆ ವಿನಾಯಿತಿ ನೀಡಬಹುದು. ಅದು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿದ್ದು ಅಂತ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿತ್ತು. ಆದ್ರೆ ದೆಹಲಿ ಸರ್ಕಾರ ಲಾಕ್ಡೌನ್ ಸಡಿಲಗೊಳಿಸದೇ ಇರಲು ನಿರ್ಧರಿಸಿದೆ. ಈ ಮೂಲಕ ಇಂತಹ ನಿರ್ಧಾರ ಕೈಗೊಂಡ ಮೊದಲ ರಾಜ್ಯ ಎನಿಸಿಕೊಂಡಿದೆ.
-masthmagaa.com
Contact Us for Advertisement