masthmagaa.com:
ಜೀವ ಬೆದರಿಕೆ ಎದುರಿಸುತ್ತಿರುವ ಸಾಹಿತಿಗಳು ಮತ್ತು ಚಿಂತಕರಿಗೆ ಅಗತ್ಯ ಭದ್ರತೆ ಒದಗಿಸೋಕೆ ರಾಜ್ಯ ಸರ್ಕಾರ ರೆಡಿಯಿದೆ. ಸಾಹಿತಿಗಳು ಬಯಸಿದ್ರೆ ರಕ್ಷಣೆ ನೀಡಲಾಗುತ್ತದೆ ಅಂತ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಇತ್ತೀಚೆಗೆ ಪ್ರಮುಖ ಸಾಹಿತಿಗಳು ಹಾಗೂ ಚಿಂತಕರಿಗೆ ಬೆದರಿಕೆ ಪತ್ರ ಬರ್ತಿವೆ ಅಂತ ಸಾಹಿತಿ ಕೆ. ಮರುಳಸಿದ್ದಪ್ಪ ಅವ್ರ ನೇತೃತ್ವದಲ್ಲಿ ಸಚಿವರನ್ನ ಮೀಟ್ ಮಾಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾತಾಡಿರುವ ಪರಮೇಶ್ವರ್, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಕಾರಣದಿಂದ ರಾಜ್ಯದಲ್ಲಿ ಗೌರಿ ಲಂಕೇಶ್ ಮತ್ತು ಎಂ.ಎಂ. ಕಲಬುರ್ಗಿ ಅವರ ಕೊಲೆಗಳಾಗಿವೆ. ಈಗಲೂ ಹಲವು ಸಾಹಿತಿಗಳಿಗೆ ಬೆದರಿಕೆ ಬರ್ತಿರೋದು ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸಲಾಗುವುದು ಅಂತ ಹೇಳಿದ್ದಾರೆ.
-masthmagaa.com
Contact Us for Advertisement