masthmagaa.com:

ಜಮ್ಮು-ಕಾಶ್ಮೀರ: ಶ್ರೀನಗರದ ಬಾಟಮಾಲೂ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಭದ್ರತಾ ಪಡೆಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಉಗ್ರರ ಮೃತದೇಹಗಳ ಜೊತೆಗೆ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಳ್ಳಲಾಗಿದೆ. ದುರದೃಷ್ಟವಶಾತ್ ಕಾರ್ಯಾಚರಣೆ ವೇಳೆ ಓರ್ವ ನಾಗರಿಕ ಮೃತಪಟ್ಟಿದ್ದು, ಸಿಆರ್​ಪಿಎಫ್​ನ ಉಪ ಕಮಾಂಡಂಟ್ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ವರ್ಷದಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ 72 ಕಾರ್ಯಾಚರಣೆಯಲ್ಲಿ ಒಟ್ಟು 177 ಉಗ್ರರನ್ನು ಹೊಡೆದು ಹಾಕಲಾಗಿದೆ. ಅದ್ರಲ್ಲೂ ಶ್ರೀನಗರ ಒಂದರಲ್ಲೇ 7 ಕಾರ್ಯಾಚರಣೆ ನಡೆದಿದ್ದು 16 ಭಯೋತ್ಪಾದಕರನ್ನು ಮಟಾಷ್ ಮಾಡಲಾಗಿದೆ ಅಂತ ಜಮ್ಮು-ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply