masthmagaa.com:
ಸಿಎಂ ಬಸವರಾಜ ಬೊಮ್ಮಾಯಿ ಇವತ್ತು ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ದುರಸ್ತಿ ಮತ್ತು ಪುನರ್ನಿರ್ಮಾಣ ಕೆಲಸಗಳು ವೇಗವಾಗಿ ನಡೆಯಲಿದೆ ಅಂತ ಹೇಳಿದ್ದಾರೆ. ಜೊತೆಗೆ ಸಾಧ್ಯವಾದ್ರೆ ನಾಳೆ ದೆಹಲಿಗೆ ಹೋಗಿ ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜ್ನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಭೇಟಿಯಾಗ್ತೀನಿ ಎಂದಿದ್ದಾರೆ. ಆದ್ರೆ ನಾಳಿನ ಭೇಟಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗೋದು ಅನುಮಾನ. ಮುಂದಿನ ಭೇಟಿಯಲ್ಲಿ ಆಗಬಹುದು ಅಂತ ಹೇಳಿದ್ದಾರೆ. ಜೊತೆಗೆ ನಿನ್ನೆ ಪ್ರಧಾನಿ ಮೋದಿ ಫೋನ್ ಕಾಲ್ ಮಾಡಿ ಮಾತನಾಡಿದ್ರು ಅಂತಾನೂ ತಿಳಿಸಿದ್ದಾರೆ. ಇನ್ನು ಮಾಜಿ ಸಿಎಂ ಯಡಿಯೂರಪ್ಪ ಇವತ್ತು ಚಾಮರಾಜಪೇಟೆಯಲ್ಲಿರೋ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿದ್ದಾರೆ.
-masthmagaa.com
Contact Us for Advertisement