masthmagaa.com:
ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗದ ಹೊಸನಗರದಲ್ಲಿ ಅತಿಹೆಚ್ಚು 174 ಮಿಲಿ ಮೀಟರ್ ಮಳೆಯಾಗಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಜೊತೆಗೆ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಮುನ್ಸೂಚನೆ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಮತ್ತೊಂದುಕಡೆ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.
ರೆಡ್ ಅಲರ್ಟ್
ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ
ಆರೆಂಜ್ ಅಲರ್ಟ್
ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ
ಯೆಲ್ಲೋ ಅಲರ್ಟ್
ಬೀದರ್, ಗದಗ, ಹಾವೇರಿ, ಕಲಬುರಗಿ, ಯಾದಗಿರಿ
ಅತ್ತ ಭಾರೀ ಮಳೆಯಿಂದಾಗಿ ಮಹರಾಷ್ಟ್ರದ ರತ್ನಗಿರಿ ಜಿಲ್ಲೆ ಅರ್ಧಕ್ಕರ್ಧ ನೀರಿನಲ್ಲಿ ಮುಳುಗಿ ಹೋಗಿದೆ. ಅತ್ತ ತೆಂಗಾಣದಲ್ಲೂ ಮತ್ತೆ ಎರಡು ದಿನ ಭಾರೀ ಮಳೆಯಾಗಲಿದೆ ಅಂತ ಎಚ್ಚರಿಕೆ ಕೊಡಲಾಗಿದೆ.
-masthmagaa.com
Contact Us for Advertisement