masthmagaa.com:
ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವ್ರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವಿಚಾರ ಈಗ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದ್ದು, ತೇಜಸ್ವಿಯವರು ಕಾಂಗ್ರೆಸ್ ಸೇರ್ಪಡೆಯಾಗ್ತಾರ ಅನ್ನೋ ಮಾತುಗಳು ಕೇಳಿ ಬರ್ತಿವೆ. ಯಾಕಂದ್ರೆ 2 ತಿಂಗಳ ಹಿಂದೆಯೂ ಶಿವಕುಮಾರ್ ಅವ್ರನ್ನ ತೇಜಸ್ವಿನಿ ಭೇಟಿಯಾಗಿದ್ದು, ಆ ಸಮಯದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿಯಲಿದ್ದಾರೆ ಅನ್ನೊ ಮಾತುಗಳು ಕೇಳಿ ಬಂದಿದ್ದವು. ಇದೀಗ ಮತ್ತೊಮ್ಮ ಆ ಚರ್ಚೆಗಳು ಮುನ್ನಲೆಗೆ ಬಂದಿವೆ.
-masthmagaa.com
Contact Us for Advertisement