ಬೆಂಗಳೂರಿಗೆ ನಾಳೆ ಕಠಿಣ ರೂಲ್ಸ್ ಘೋಷಣೆ: ಡಾ.ಕೆ. ಸುಧಾಕರ್

masthmagaa.com:

ಬೆಂಗಳೂರಿನಲ್ಲಿ ಕೊರೋನಾ ಹಾವಳಿ ಹೆಚ್ಚಾಗಿರೋ ಹಿನ್ನೆಲೆ ಬೇರೆ ಜಿಲ್ಲೆಗಳಿಗೆ ಹೋಲಿಸಿದ್ರೆ ಬೆಂಗಳೂರಿಗೆ ವಿಶೇಷವಾಗಿ ಕಠಿಣ ನಿಯಮಗಳನ್ನ ಜಾರಿಗೆ ತರಲಾಗುತ್ತೆ. ಸೋಮವಾರ ಎಲ್ಲಾ ಮುಖಂಡರ ಜೊತೆ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸ್ತೀವಿ ಅಂತ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಕೊರೋನಾ ಪರಿಸ್ಥಿತಿಯನ್ನ ಅವಲೋಕಿಸಲು ನಾಳೆ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬೆಂಗಳೂರಿಗೆ ಕಠಿಣ ರೂಲ್ಸ್ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ಇನ್ನು ಕೊರೋನಾ ಸೋಂಕು ಈಗ ಸಮುದಾಯ ಮಟ್ಟದಲ್ಲಿ ಹರಡಿದೆ ಅಂತ ಕೇಂದ್ರ ಸರ್ಕಾರವೇ ಹೇಳಿದೆ. ಕೆಲ ರಾಜ್ಯಗಳಲ್ಲಿ ಪಾಸಿಟಿವಿಟಿ ರೇಟ್ 10 ಪರ್ಸೆಂಟ್​, 20 ಪರ್ಸೆಂಟ್ ದಾಟಿ ಹೋಗಿರೋದೇ ಇದಕ್ಕೆ ಉದಾಹರಣೆ. ಹೀಗಾಗಿ ಬೆಂಗಳೂರಿಗೆ ಕಠಿಣ ನಿಯಮಗಳು ಬೇಕು ಅನ್ನೋದು ನನ್ನ ಅಭಿಪ್ರಾಯ ಅಂತ ಡಾ.ಕೆ. ಸುಧಾಕರ್ ಹೇಳಿದ್ರು.

-masthmagaa.com

Contact Us for Advertisement

Leave a Reply