ದೆಹಲಿಯಲ್ಲಿ ಟ್ರ್ಯಾಕ್ಟರ್ ಸುಟ್ಟ ಕಾಂಗ್ರೆಸ್​​​ ಕಾರ್ಯಕರ್ತರು..!

masthmagaa.com:

ದೆಹಲಿ: ವಿವಾದಿತ ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕುತ್ತಲೇ ದೇಶವ್ಯಾಪಿ ಪ್ರತಿಭಟನೆ ಜೋರಾಗಿದೆ. ಇಂದು ದೆಹಲಿಯಲ್ಲಿ ರೊಚ್ಚಿಗೆದ್ದ ರೈತರು ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್​​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಮೂಲಕ ಬೆಂಕಿ ನಂದಿಸಿ, ಟ್ರ್ಯಾಕ್ಟರ್ ತೆರವುಗೊಳಿಸಿದ್ದಾರೆ. ಪ್ರತಿಭಟಿಸುತ್ತಿದ್ದವರು ಪಂಜಾಬ್ ಯೂತ್ ಕಾಂಗ್ರೆಸ್ ಸದಸ್ಯರಾಗಿದ್ದು, ಕಾಂಗ್ರೆಸ್ ಪರ ಘೋಷಣೆಗಳನ್ನು ಕೂಗುತ್ತಿದ್ದರು ಅಂತ ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದ ಐವರನ್ನು ವಶಕ್ಕೆ ಪಡೆಯಲಾಗಿದ್ದು, ಅವರ ಕಾರನ್ನು ಸೀಜ್ ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್​​, ಇವೆಲ್ಲವೂ ಕಾಂಗ್ರೆಸ್​​ನ ಡ್ರಾಮಾ.. ಇದೇ ಕಾರಣಕ್ಕೆ ಜನ ಕಾಂಗ್ರೆಸ್​ನ್ನು ಅಧಿಕಾರದಿಂದ ದೂರ ಇರಿಸಿದ್ದಾರೆ ಎಂದಿದ್ದಾರೆ.

ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ, ರೈತರ ಬೆಲೆ ಖಾತ್ರಿ ಒಪ್ಪಂದ ಮತ್ತು ಕೃಷಿ ಸೇವೆಗಳ ಮಸೂದೆ, ರೈತರ ಉತ್ಪಾದನೆ, ವ್ಯಾಪಾರ ಮತ್ತು ವಾಣಿಜ್ಯ ಮಸೂದೆಗಳು ಸಂಸತ್​ನ ಎರಡೂ ಸದನಗಳಲ್ಲಿ ಪಾಸ್ ಆಗಿತ್ತು. ನಿನ್ನೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ಮೂರೂ ಮಸೂದೆಗಳಿಗೆ ಅಂಕಿತ ಹಾಕಿದ್ದರು.

 

-masthmagaa.com

Contact Us for Advertisement

Leave a Reply