masthmagaa.com:
ಜಮ್ಮು – ಕಾಶ್ಮೀರದ ಪೂಂಚ್ ಬಳಿ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರ ಒಳನುಸುಳುವಿಕೆಯ ಯತ್ನವನ್ನ ಸೇನಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ದೆಗ್ವಾರ್ ಸೆಕ್ಟರ್ನಲ್ಲಿ ಕೆಲವು ಭಯೋತ್ಪಾದಕರು ಭಾರತದ ಕಡೆಗೆ ನುಸುಳಲು ಪ್ರಯತ್ನಿಸುತ್ತಿರೋದು ಗಮನಕ್ಕೆ ಬಂದಿದ್ದು, ಇಬ್ಬರು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆದರೆ ಅವರ ದೇಹವನ್ನು ಘಟನಾ ಸ್ಥಳದಿಂದ ಇನ್ನೂ ಪಡೆಯಲಾಗಿಲ್ಲ. ಈ ಇಡೀ ಪ್ರದೇಶವನ್ನು ಸೇನೆ ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗ್ತಿದೆ ಅಂತ ಅಧಿಕಾರಿಗಳು ಹೇಳಿದ್ದಾರೆ.
-masthmagaa.com
Contact Us for Advertisement