masthmagaa.com:
ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರೋ ಛತ್ತೀಸ್ಗಡದಲ್ಲಿ ಮತ್ತೊಂದು ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆದಿದೆ. ಕಂಖರ್ ಜಿಲ್ಲೆಯ ಕೊಯಲಿಬೆಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಾಡಿನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರನ್ನ ಹತ್ಯೆ ಮಾಡಲಾಗಿದೆ. ಘಟನೆ ಬಗ್ಗೆ ಮಾತನಾಡಿದ ಬಸ್ತಾರ್ ರೇಂಜ್ನ IGP ಪಿ.ಸುಂದರ್ರಾಜ್ ಜಿಲ್ಲಾ ಮೀಸಲು ಪಡೆ ಹಾಗೂ ಪೊಲೀಸರು ನಡೆಸಿದ ಆ್ಯಂಟಿ ನಕ್ಸಲ್ ಆಪರೇಷನ್ ಇದಾಗಿತ್ತು. ಬಹಳ ಹೊತ್ತು ನಡೆದ ಗುಂಡಿನ ಚಕಮಕಿಯ ನಂತರ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಮೃತರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಕಾರ್ಯಾಚರಣೆ ಕೈಗೊಂಡ ಸಿಬ್ಬಂದಿಗಳಿಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಅಂತ ಗೊತ್ತಾಗಿದೆ. ಅಂದ್ಹಾಗೆ ಈ ಕಂಖರ್ ಜಿಲ್ಲೆಯ ಮೂರು ಕ್ಷೇತ್ರಗಳು ಸೇರಿದಂತೆ ಒಟ್ಟು 20 ಕ್ಷೇತ್ರಗಳಿಗೆ ನವೆಂಬರ್ 7 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ.
-masthmagaa.com
Contact Us for Advertisement