ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಕೇಸ್: ಸಿಕ್ಕಿಬಿದ್ದ ಆರೋಪಿ

masthmagaa.com:

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ಚೌಗಲೆ ಅನ್ನೋರನ್ನ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಉಡುಪಿಯಿಂದ ಪರಾರಿಯಾಗಿದ್ದ ಆರೋಪಿ ಬೆಳಗಾವಿಯ ಕುಡಚಿಯ ಸಂಬಂಧಿಕರ ಮನೆಯಲ್ಲಿ ಅಡಗಿಕೊಂಡಿದ್ದ. ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಉಡುಪಿ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಲ್ಲಿ ಏರ್ ಇಂಡಿಯಾ ಸಿಬ್ಬಂದಿಯಾಗಿದ್ದ ಹಂತಕ ಪ್ರವೀಣ್ ಹತ್ಯೆಯಾದ ಅಯ್ನಾಜ್ ಸಹೋದ್ಯೋಗಿಯಾಗಿದ್ದ ಅಂತ ತಿಳಿದು ಬಂದಿದೆ. ಇನ್ನು ಅಯ್ನಾಜ್ ಮೇಲಿನ ದ್ವೇಷಕ್ಕೆ ಆಕೆಯ ಕುಟುಂಬದ ನಾಲ್ವರನ್ನ ಹತ್ಯೆ ಮಾಡಿ ಪರಾರಿಯಾಗಿದ್ದ.

-masthmagaa.com

Contact Us for Advertisement

Leave a Reply