ಇಹಲೋಕ ತ್ಯಜಿಸಿದ ಉಮೇಶ ಕತ್ತಿ! ಸ್ವಗ್ರಾಮದಲ್ಲಿ ಅಂತಿಮ ಸಂಸ್ಕಾರ

masthmagaa.com:

ಹೃದಯಾಘಾತದಿಂದ ಸಾವನ್ನಪ್ಪಿರುವ ಸಚಿವ ಉಮೇಶ್‌ ಕತ್ತಿಯವರ ಅಂತಿಮ ಸಂಸ್ಕಾರ ಇಂದು ಸ್ವಗ್ರಾಮ ಬೆಳಗಾವಿಯ ಬೆಲ್ಲದ ಬಾಗೇವಾಡಿಯ ತೋಟದ ಮನೆಯಲ್ಲಿ ನೆರವೇರಿದೆ. ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷನಾಯಕ ಸಿದ್ದರಾಮಯ್ಯ, ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿಎಸ್‌ ಯಡಿಯೂರಪ್ಪ ಸೇರಿದಂತೆ ಸಚಿವರು, ಶಾಸಕರುಗಳ ಆದಿಯಾಗಿ ಇಡೀ ಜನಸಾಗರವೇ ಕತ್ತಿ ಅವರ ಅಂತಿಮ ದರ್ಶನಕ್ಕೆ ಹರಿದು ಬಂದಿತ್ತು. ಇನ್ನು ರಾಜ್ಯದಲ್ಲಿ ಸಚಿವರ ಸಾವಿನ ನಿಮಿತ್ತ ರಾಜ್ಯ ಸರ್ಕಾರ ಮೂರುದಿನ ಶೋಕಾಚರಣೆ ಘೋಷಣೆ ಮಾಡಿದೆ. ಅತ್ತ ಕತ್ತಿಯವರ ಸಾವಿಗೆ ಪ್ರಧಾನಿ ಮೋದಿ ಸೇರಿದಂತೆ, ಕೇಂದ್ರ ಹಾಗೂ ರಾಜ್ಯ ನಾಯಕರು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಕ್ಕೆ ಮೋದಿ ಪತ್ರ ಬರೆದು ಸಾಂತ್ವಾನ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply